ಬಾಗಲಕೋಟೆ ; ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕಮತಗಿ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಇಳಕಲ್ ಮೂಲದ ಅಮರೇಶ ಬೇನಕನಾಳಮಠ (24), ಶರಣಯ್ಯ ಬೆಳಕನಾಳಮಠ (17) ಮೃತ ಪಟ್ಟ ಸಹೋದರರು ಎಂದು ತಿಳಿದು ಬಂದಿದೆ.
ಬೈಕ್ ಮೇಲೆ ತೆರಳುತ್ತಿದ್ದ ಇಬ್ಬರು ರಸ್ತೆಯ ಮೇಲೆ ನಿಂತಿದ್ದ ಟ್ಯಾಕ್ಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಸುದ್ದಿ ತಿಳಿದ ತಕ್ಷಣ ಅಮೀನಗಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.