Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಸಿನೆಮಾ
    • EPaper
    • ಅರ್ಜಿ ಆಹ್ವಾನ
    • ಲೇಖನಗಳು
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ಅಪಪ್ರಚಾರಕ್ಕೆ ಅಭಿವೃದ್ಧಿಯೇ ತಕ್ಕ ಉತ್ತರ: ಮೇಟಿ
    ಬಾಗಲಕೋಟೆ

    ಅಪಪ್ರಚಾರಕ್ಕೆ ಅಭಿವೃದ್ಧಿಯೇ ತಕ್ಕ ಉತ್ತರ: ಮೇಟಿ

    SanjeBy SanjeJuly 21, 20252 Mins Read
    ಮೇಟಿ

    ಬೇವೂರು: ಅಭಿವೃದ್ಧಿಗೆ ರಾಜ್ಯ ಸರ್ಕಾರದಲ್ಲಿ ಹಣವಿಲ್ಲವೆಂದು ಅಪಪ್ರಚಾರವನ್ನು ಮಾಡುವವರಿಗೆ ಬಾಗಲಕೋಟ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿವೆ ಎಂದು ಶಾಸಕ ಎಚ್.ವೈ. ಮೇಟಿ ಹೇಳಿದರು.

    ಬಾಗಲಕೋಟ ವಿಧಾನಸಭಾ ಮತಕ್ಷೇತ್ರದ ರಾಂಪುರ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ ಯಿಂದ ಅಚನೂರ ಕ್ರಾಸ್‌ದಿಂದ ಆಲಮಟ್ಟಿ ಡ್ಯಾಮ್ ಬಾರ್ಡರ್ ವರೆಗೆ ಅಂದಾಜು ಮೊತ್ತ ೨೭.೭೦ ಲಕ್ಷ ರೂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರ ಮನೆ ಬಾಗಿಲಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ. ಇದನ್ನು ಕಂಡು ವಿಪಕ್ಷ ನಾಯಕರು ಹೊಟ್ಟೆ ಉರಿ ತಾಳಲಾರದೆ ಸರಕಾರದ ಬಳಿ ಹಣವೇ ಇಲ್ಲ. ಅಭಿವೃದ್ಧಿ ಮಾಡುತ್ತಿಲ್ಲ ಎಂಬ ಆರೋಪ ಮಾಡುತ್ತಿದ್ದಾರೆ.

    ಹೀಗಾಗಿ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವ ಮೂಲಕ ನಮ್ಮ ಅಭಿವೃದ್ಧಿಗಳನ್ನು ತೋರಿಸುತ್ತೇವೆ ಎಂದ ಅವರು ಗುತ್ತಿಗೆದಾರರು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮತ್ತು ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅನುದಾನದ ಕೊರತೆಯಿಂದ ಅಭಿವೃದ್ಧಿ ಕುಂಠಿತ ಎನ್ನುವುದು ಸಾಧ್ಯವಿಲ್ಲ.

    ಪ್ರತಿ ಶಾಸಕರಿಗೆ ೫೦ ಮತ್ತು ೨೫ ಕೋಟಿ ರೂ ಅನುದಾನ ನೀಡಲಾಗುತ್ತಿದೆ. ಹಿಂದಿನ ಸರ್ಕಾರ ದಲ್ಲಿ ಬಾಕಿ ಉಳಿದ ಬಿಲ್ಲುಗಳನ್ನು ಕೊಡುವುದೇ ನಮ್ಮ ಸರ್ಕಾರಕ್ಕೆ ಮತ್ತೊಂದು ಹೊರೆಯಾಗಿದೆ ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಿಧಾನ ಗತಿ ಸಾಗುವುದಕ್ಕೆ ಕಾರಣವಾಗಿದೆ ಎಂದರು.

    ಕಾಂಗ್ರೆಸ್ ಮುಖಂಡ ಪರಶುರಾಮ್ ಮಹಾರಾಜ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಗಳನ್ನು ಶಾಸಕರು ಈಡೇರಿಸುವ ಪ್ರಯತ್ನದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಕ್ಷೇತ್ರಕ್ಕೆ ವಿಶೇಷ ಅನುದಾನ ತರುವ ಪ್ರಯತ್ನ ನಡೆದಿದ್ದು ಶೀಘ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಶಾಸಕರು ಪ್ರಯತ್ನ ನಡೆಸಿದ್ದಾರೆ ಎಂದರು.

    ಪುನರ್ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಹಳ್ಳಿ ಮಾತನಾಡಿದರು. ಮುಖಂಡರಾದ ಉಮೇಶ ಮೇಟಿ, ರಮೇಶ ಆಕಳವಾಡಿ, ಮಲ್ಲಿಕಾರ್ಜುನ ಮೇಟಿ, ಎಸ್.ಎನ್. ರಾಂಪುರ, ಸಿ.ಎನ್.ಬಾಳಕ್‌ನವರ್, ಬಾಲಪ್ಪ ಗಣಿ, ನಾರಾಯಣ ಶಿಲ್ಪಿ, ಜಟ್ಟಪ್ಪ ಮಾದಾಪುರ, ಫಕೀರಪ್ಪ ಕೊನ್ನೂರ, ಪವನ್ ಗಗನದ, ಶಿವಪ್ಪ ಕಾಳಗಿ, ಮಲ್ಲು ದ್ಯಾವಣ್ಣನವರ್ ಇದ್ದರು.

    Share. Facebook Twitter Pinterest LinkedIn WhatsApp Reddit Tumblr Email

    Related Posts

    July 21, 2025 ಬಾಗಲಕೋಟೆ

    ರೈತರ ಉತ್ಪನ್ನಗಳಿಗೆ ಬ್ರ್ಯಾಂಡ್ ಅಗತ್ಯ: ತಿಮ್ಮಾಪೂರ

    July 21, 2025 ಸಣ್ಣ ಸುದ್ದಿಗಳು

    ಕಾರ್ಮಿಕ ಸಚಿವ ಸಂತೋಷ್ ಲಾಡ್ ಜಿಲ್ಲಾ ಪ್ರವಾಸ

    July 21, 2025 ಬಾಗಲಕೋಟೆ

    ಸಮೃದ್ಧಿ ಹೆಚ್ಚಾದಂತೆ ಸಂಸ್ಕೃತಿ ಕ್ಷೀಣಿಸಬಾರದು: ಗೌಡಪ್ಪಗೋಳ

    July 21, 2025 ಬಾಗಲಕೋಟೆ

    ನೂತನ ಕಟ್ಟಡ ಕಾಮಗಾರಿಗೆ ಶಾಸಕ ಮೇಟಿ ಚಾಲನೆ

    July 21, 2025 ಸಿನೆಮಾ

    ‘ಕಾಂತಾರ ಚಾಪ್ಟರ್ 1’ ಚಿತ್ರೀಕರಣಕ್ಕೆ ತೆರೆ: ಅ.2ಕ್ಕೆ ಬಿಡುಗಡೆ!

    July 19, 2025 ಅರ್ಜಿ ಆಹ್ವಾನ

    ವಾಯುಪಡೆ ಏರ್‌ಮನ್ ನೇಮಕಾತಿಗೆ ಅರ್ಜಿ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ, ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.