ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊ ಳಿಸಲು ಆಗ್ರಹಿಸಿ ನಡೆಯುತ್ತಿರುವ ಸಂತ್ರಸ್ತರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನ ತೀವ್ರ ಸ್ವರೂಪ ಪಡೆದುಕೊಂಡರುವ ಸಂತ್ರಸ್ತರ ಹೋರಾಟ ಇಂದು ಬೆಳಗ್ಗೆ ಬೀಳಗಿ ಕ್ರಾಸ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು, ಎಸ್ ಎಲ್ ಓ ಕಚೇರಿಗೆ ಮುತ್ತಿಗೆ ಹಾಕಿ ಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಸ್ಪಂದಿಸದ ಹಿನ್ನೆಲೆ ರೊಚ್ಚಿಗೆದ್ದ ಮುಳುಗಡೆ ಸಂತ್ರಸ್ತರು ಬೀಳಗಿ ಕ್ರಾಸ್ ಬಳಿ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ಹೊರಹಾಕಿದರು. ಐದು ರಿಂದ ಆರು ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು ಕಂಡು ಬಂದಿತು.
Author: Sanje
ಬಾಗಲಕೋಟೆ ; ಮನಸ್ಸಿಗೆ ಉಲ್ಲಾಸ ತರುವ ಹಾಗೂ ಸ್ಪೂರ್ತಿದಾಯಕವಾದ ಕ್ರೀಡಾ ಚಟುವಟಿಕೆಗಳು ಬದುಕಿಗೆ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. ನವನಗರದ ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡ ವಾರ್ಷಿಕ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಪೊಲೀಸ್ ಆಗಿರಬಹುದು, ಸಾಮಾನ್ಯ ವ್ಯಕ್ತಿಗಳಾಗಿರಬಹುದು ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಮಾತ್ರ ನಮಗೆ ನಾವೆ ಕಂಡುಕೊಳ್ಳುತ್ತೀವಿ. ಅದೇ ನಮಗೆ ಸಿಗುವ ಉತ್ತಮ ಉಡುಗೊರೆ. ನಾವುದೇ ಆಟ ಆಡಿದಾಗ, ಹವ್ಯಾಸಗಳಲ್ಲಿ ತೊಡಗಿದಾಗ ಅದು ಸಂತೋಷ, ಸಮಾಧಾನ ಸಿಗುತ್ತದೆ ಎಂದು ತಿಳಿಸಿದರು. ಎಲ್ಲ ಕ್ರೀಡೆಗಳಲ್ಲಿ ಪರಿಪೂರ್ಣವಾಗಿ ತೊಡಗಿಕೊಳ್ಳಲು ಆಗದಿದ್ದರೂ ನಮಗೆ ಹೊಂದಿಕೊಳ್ಳುವ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಮಾತ್ರ ವ್ಯಯಕ್ತಿಕ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾದ್ಯವಾಗುತ್ತದೆ. ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಬೇರೆಯವರಿಗೆ ಸ್ಪೂರ್ತಿ ಆಗುತ್ತದೆ. ಪ್ರತಿದಿನ ಊಟ, ನಿದ್ರೆ ಮಾಡುವ ಹಾಗೆ ಇಂತಹದೊಂದು ವಿಶೇಷ ಕ್ರೀಡಾ ಚಟುವಟಿಕೆಗಳು ಮುಖ್ಯವಾಗಿವೆ ಎಂದರು. ನಮ್ಮೆಲ್ಲ ಕ್ರಿಯೆಗಳು, ಕಾರ್ಯಚಟುವಟಿಕೆಗಳು ಬೇರಯವರನ್ನು ಉದ್ದೇಶಿಸಿದ್ದಾಗಿರುತ್ತೆ. ನಮ್ಮ ಕುಟುಂಬದಲ್ಲಿ ಆಗಿರಬಹುದು, ಹೊರಗಡೆ ತೋರಿಸುವ ಕಲೆ…
ಬಾಗಲಕೋಟೆ ; ಬಾಗಲಕೋಟೆ ನಗರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಗರೋತ್ಥಾನ -೪ ಅಡಿಯಲ್ಲಿ ಕೈಗೊಳ್ಳಲಾಗಿದೆ. ಗುತ್ತಿಗೆದಾ ರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಹೇಳಿದರು. ನಗರದ ಮಹಾವೀರ ರಸ್ತೆಯಲ್ಲಿರುವ ಮಾರುಕಟ್ಟೆ ಪ್ರಾರಂಗಣದಲ್ಲಿ ಶನಿವಾರ ನಗರಸಭೆ, ನಗರಾಭಿವೃದ್ಧಿ ಕೋಶಿ ಅಡಿಯಲ್ಲಿ ನಗರೋ ತ್ಥಾನ -೪ ಅಡಿಯಲ್ಲಿ ೩.೩೦ ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಾರುಕಟ್ಟೆ ಪ್ರದೇಶದ ಒಳಗೆ ಇರುವ ಅಂಗಡಿ ಮುಂಗಟ್ಟುಗಳನ್ನು ಅಭಿವೃದ್ಧಿ ಪಡಿಸಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಾರ್ವ ಜನಿಕರು, ತರಕಾರಿ ಮಾರಾಟ ಗಾರರು ಇದರ ಸದು ಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ೧೦ ಅಂಗ ನವಾಡಿ, ಗ್ರಂಥಾಲ ಯಗಳು, ಸೋಲಾರ ಲೈಟ ಸೇರಿದಂತೆ ವಿವಿಧ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುದಾನ ನೀಡಿದೆ. ಅಚ್ಚುಕಟ್ಟಾದ ಕೆಲಸ ಆಗಬೇಕು. ಒಟ್ಟಾರೆ ಬಾಗಲ ಕೋಟೆ ನಗರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು…
ಬಾಗಲಕೋಟೆ ; ಸ್ಥಳೀಯ ಶಾಸಕ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್.ಮೇಟಿ ಅವರು ಶನಿವಾರ ಸಂಜೆ ಬಿಟಿಡಿಎ ಕಾಮಗಾರಿಗಳನ್ನು ಪರಿಶೀಲಿಸಿದರು. ನವನಗರದ ಯುನಿಟ್ -2 ರಲ್ಲಿ ಹಿಂದೆ ನಡೆದ ಕಾಮಗಾರಿಗಳು, ಬಿಟಿಡಿಎ ಕಟ್ಟಡಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಿಟಿಡಿಎ ಮುಖ್ಯ ಅಭಿಯಂತರರಾದ ಬಸವರಾಜ, ಕಾರ್ಯನಿರ್ವಾಹಕರಾದ ವಿಜಯಶಂಕರ ಹೆಬ್ಬಳ್ಳಿ, ಎಸ್.ಎಸ್.ಡೊಳ್ಳಿನ, ಸಕಾನಿ ಎಸ್.ಆರ್.ತೆಗ್ಗಿ, ವಟವಟಿ, ಹಾಲವರ ಇನ್ನೀತರ ಅಧಿಕಾರಿಗಳು ಹಾಗೂ ಮುಖಂಡರಾದ ನಾಗರಾಜ ಹದ್ಲಿ, ಹೊಳಬಸು ಶೆಟ್ಟರ, ರಜಾಕ ಬೆನ್ನೂರ ಸೇರಿದಂತೆ ಅನೇಕರು ಇದ್ದರು.
ಬಾಗಲಕೋಟೆ ; ತಮ್ಮ ನಡೆ, ನುಡಿ ಜೀವನದ ಮೂಲಕ ಜಾತೀಯತೆಯ ಸಂಕುಚಿತ ಮನೋಭಾವವನ್ನು ಹೊರಗೆ ಹಾಕಿ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡವರು ಭಕ್ತ ಕನಕದಾಸರು ಎಂದು ಶಾಸಕರು ಆಗಿರುವ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಹೇಳಿದರು. ನವನಗರದ ಕಲಾಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜ್ಯಾತ್ಯಾತೀತತೆಯ ಭಾವ ಎಲ್ಲರಲ್ಲಿ ತರುವ ಸಂದೇಶ ಭಕ್ತ ಕನಕದಾಸರದಾಗಿತ್ತು. ಇಂತಹ ಮಹಾತ್ಮರ ಜೀವನ ಶೈಲಿ ಹಾಗೂ ಆದರ್ಶಗಳನ್ನು ಯುವಕರು, ವಿದ್ಯಾರ್ಥಿಗಳು ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕತೆ ಬರುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಹುಟ್ಟಿನ ಮೇಲೆ ನಿಂತಿರುವ ಸಮಾಜ ಇವತ್ತಿಗೂ ಇದೆ. ಅದನ್ನು ಪರಿವರ್ತನೆ ಮಾಡಿ ಎಲ್ಲರೂ ಒಂದೇ ಎಂಬ ತತ್ವವನ್ನು ಎಲ್ಲರಲ್ಲೂ ಪ್ರಸರಿಸಲು ಸಮ ಸಮಾಜದ ನಿರ್ಮಾಣ ಮಾಡಬೇಕೆಂಬ ನಿಟ್ಟಿನಲ್ಲಿ ಆ ಹೊತ್ತಿಗೆ ಕನಕದಾಸರು ಮಾಡಿದ…
ಬಾಗಲಕೋಟೆ: ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಲ್ಲಿ ಪರಸ್ಪರ ಸಹಕಾರ ಅವಶ್ಯವಾಗಿದ್ದು, ಎಲ್ಲ ರಂಗಗಳಿಗೂ ಈ ಸಹಕಾರಿ ರಂಗ ಮುನ್ನುಡಿ ಬರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪಕ್ಕದಲ್ಲಿ ಮೈದಾನದಲ್ಲಿ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಸಹಕಾರ ರಂಗ ಬಲಿಷ್ಟವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯವೆಂದು ತಿಳಿಸಿದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ದೇಶದಲ್ಲಿಯೇ ಸಹಕಾರ ಕ್ಷೇತ್ರಕ್ಕೆ ಮುನ್ನುಡಿ ಬರೆದಿದ್ದು, ನಮ್ಮ ರಾಜ್ಯದ ಗದಗ ಜಿಲ್ಲೆಯ ಕನಗಿನಹಾಳ ಶಿವನಗೌಡ್ರ 1904ರಲ್ಲಿ ಸ್ಥಾಪಿಸಿದ ಸಹಕಾರಿ ಸಂಘ. ಸ್ವಾತಂತ್ರ್ಯದ ನಂತರ ನೆಹರು ಹಾಗೂ ಗಾಂಧಿಜೀಯವರು ಈ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ತಮ್ಮ ಪಂಚವಾರ್ಷಿಕ ಯೋಜನೆಗಳಲ್ಲಿ ಈ ಸಹಕಾರಿ ಕ್ಷೇತ್ರವು ಒಳಗೊಂಡಿತ್ತು. ಹಳ್ಳಿಯಿಂದ ದಿಲ್ಲಿಯವರೆಗೆ ಗ್ರಾಮ ಸ್ವರಾಜ್ಯ ಆಗಬೇಕೆಂಬ ಗಾಂದೀಜಿಯವರ ಕಲ್ಪನೆಯಂತೆ ಗ್ರಾಮೀಣ ಪ್ರದೇಶದಲ್ಲಿ ಮೊದಲು ಆರ್ಥಿಕವಾಗಿ ಪ್ರಬಲರಾದಾಗ ಮಾತ್ರ ದೇಶ ಸುಭದ್ರವಾಗುತ್ತದೆ…
ಬಾಗಲಕೋಟೆ; ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು. 40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ…
ಬಾಗಲಕೋಟೆ : ಜಿಲ್ಲೆಯ ವಿವಿಧ ತಾಲೂಕಾ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ 2017ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ 172 ವಿವಿಧ ಹುದ್ದೆಯ ಸಿಬ್ಬಂದಿಗಳ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿದ ಆದೇಶ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಗುರುವಾರ ವಿತರಿಸಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜರುಗಿದ ಸಿಬ್ಬಂದಿ ನೇಮಕಾತಿ ಪ್ರಸ್ತಾವನೆಗೆ ನೀಡಿದ ಅನುಮೋದನೆ ಆದೇಶ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆದೇಶ ಪ್ರತಿಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ನಿಮ್ಮ ಕಾರ್ಯವೈಖರಿ ಬಗ್ಗೆ ಸಲ್ಲಿಸಿದ ಪ್ರಸ್ತಾವನೆ ಪರಿಗಣಿಸಿ 172 ಸಿಬ್ಬಂದಿಗಳಿಗೆ ಅನುಮೋನೆ ನೀಡಲಾಗಿದೆ ಎಂದರು. ನಿಯೋಜನೆಗೊಂಡ ಸಿಬ್ಬಂದಿಗಳೆಲ್ಲ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಿರಿ, ಮುಂದೆಯು ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿ ಪಂಚಾಯತಿ ಹೆಸರು ತರುವ ಕೆಲಸವಾಗಬೇಕು. ಗ್ರಾಮ ಪಂಚಾಯತ ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಸಿಗಬೇಕಾದರೆ, ಮುಖ್ಯವಾಗಿ ಜನರ ಹತ್ತಿರದಿಂದ ಕೆಲಸ ಮಾಡುವವ ಪಾತ್ರ…
ಬಾಗಲಕೋಟೆ : ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಗ್ರಾಮದ ಈರಣ್ಣ ಯಳ್ಳಿಗುತ್ತಿ, ಮಹಾದೇವ ಮಾಚಕನೂರ, ಹುಚ್ಚಪ್ಪ ಅಗಸಿನಮುಂದಿನ ಹಾಗೂ ಬೆನಕಟ್ಟಿ ಗ್ರಾಮದ ವೇಮಣ್ಣ ಬೆಣ್ಣೂರ, ಪ್ರಕಾಶ ಬೆಣ್ಣೂರ ರವರ ಜಮೀನಿನಲ್ಲಿ ಅತಿಯಾದ ಮಳೆಯಿಂದ ಹಾನಿಗೊಳಗಾದ ಈರುಳ್ಳಿ ಬೆಳೆ ತಾಕುಗಳನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರರು ಅಮರೇಶ ಪಮ್ಮಾರ ಸೇರಿದಂತೆ ಸಹಾಯಕ ತೋಟಗಾರಿಕೆ ನಿರ್ದೇಶಕರು ಇದ್ದರು.
ಬಾಗಲಕೋಟೆ : ಮನುಕುಲಕ್ಕೆ ನಿಜವಾದ ಸಮಾಜಶಾಸ್ತ್ರ ತಿಳಿಸಿ ರಾಮಾಯಣ ಕಾವ್ಯ ರಚಿಸಿದ ಮಹರ್ಷಿಯವರು ರಾಮಾಯಣದ ಮಹಾ ಕೋಗಿಲೆಯಾಗಿದ್ದಾರೆಂದು ವಿಧಾನ ಪರಿಷತ್ ಶಾಸಕರಾದ ಪಿ.ಎಚ್.ಪೂಜಾರ ಹೇಳಿದರು. ನವನಗರದ ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಹಾಗೂ ಮಹರ್ಷಿ ವಾಲ್ಮೀಕಿ ಸಮಾಜ ಮತ್ತು ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ವಾಲ್ಮೀಜಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಮಾಯಣ ಒಂದು ಮದುರ ನೀತಿ ಕಾವ್ಯವಾಗಿದ್ದು, ಒಂದು ಕುಟುಂಬದಲ್ಲಿ ಹೇಗಿರಬೇಕೆಂಬ ರೀತಿಯನ್ನು ತಿಳಿಸಿದೆ. ಇಂದು ರಾಮಾಯಣದಲ್ಲಿರುವ ಸಹೋದರತ್ವವನ್ನು ಎಲ್ಲರೂ ಪರಿಪಾಲಿಸಬೇಕಿದೆ ಎಂದರು. ರಾಮಾಯಣದಂತಹ ಮಹಾ ಕೃತಿಯನ್ನು ರಚಿಸಿದ ವಾಲ್ಮೀಕಿ ಅನಕ್ಷರಸ್ತರಾಗಿದ್ದರೂ ರಾಮ ರಾಮ ಎಂಬ ಜಪಮಾಡಿ ರಾಮಾಯಣದಂತ ಮಹಾಕಾವ್ಯ ರಚಿಸಿ ವಿಶ್ವದಲ್ಲಿಯೇ ಪ್ರಪ್ರಥಮ ಆದಿಕವಿ ಆಗುವದಲ್ಲದೇ ರಾಮಾಯಣವನ್ನು ವಿಶ್ವದ ಪ್ರಥಮ ಕಾವ್ಯವನ್ನಾಗಿಸಿದವರು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್..ವಾಯ್.ಮೇಟಿ ನ ವಾಲ್ಮೀಕಿ ಜಯಂತಿ ವಿಶೇಷವಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಪರಿಶಿಷ್ಟ ಪಂಗಡದ ವಸತಿ ಶಾಲೆ ಹಾಗೂ ರಾಯಚೂರಿನ…