Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • ಸಿನೆಮಾ
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ಅಯೋಧ್ಯೆಗೆ ವಾರಕ್ಕೆ ಮೂರು ದಿನ ರೈಲು ಓಡಿಸಿ: ಪೂಜಾರ
    ಬಾಗಲಕೋಟೆ

    ಅಯೋಧ್ಯೆಗೆ ವಾರಕ್ಕೆ ಮೂರು ದಿನ ರೈಲು ಓಡಿಸಿ: ಪೂಜಾರ

    SanjeBy SanjeMay 22, 20251 Min Read
    ಅಯೋಧ್ಯೆ

    ಬಾಗಲಕೋಟೆ: ಹುಬ್ಬಳ್ಳಿಯಿಂದ ಅಯೋಧ್ಯೆಗೆ ಸಂಚರಿಸಲಿರುವ ರೇಲ್ವೆ ಸೇವೆಯನ್ನು ವಾರಕ್ಕೆ ಮೂರು ದಿನಕ್ಕೆ ವಿಸ್ತರಿಸುವಂತೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಕೇಂದ್ರದ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ.

    ನವೀಕರಣಗೊಂಡ ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜಾರ ಸಚಿವರಿಗೆ ಮನವಿ ನೀಡಿದ್ದು, ಈಗ ಹುಬ್ಬಳ್ಳಿಯಿಂದ ಅಯೋಧ್ಯೆಗೆ ಬಾಗಲಕೋಟೆ-ವಿಜಯಪುರ ಮೂಲಕ ವಾರಕ್ಕೆ ಒಂದು ಬಾರಿ ಸಂಚರಿಸುವ ರೇಲ್ವೆ ಸೇವೆಯನ್ನು ವಾರಕ್ಕೆ ಮೂರು ದಿನ ಒದಗಿಸಬೇಕು ಎಂದಿದ್ದಾರೆ.

    ವಿಜಯಪುರ-ಬಾಗಲಕೋಟೆ-ಗದಗ ಮೂಲಕ ಈ ಭಾಗದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವುದರಿಂದ ನಿತ್ಯ ರಾತ್ರಿ ೮ ಗಂಟೆಗೆ ವಿಜಯಪುರದಿಂದ ಸೂಪರಫಾಸ್ಟ್ ರೇಲ್ವೆ ಸೇವೆ ಒದಗಿಸಬೇಕು. ಗುಜರಾತ, ರಾಜಸ್ಥಾನ ರಾಜ್ಯಕ್ಕೆ ಸಂಪರ್ಕಿಸುವ ರೇಲ್ವೆ ಸೇವೆ ಪ್ರಾರಂಭಿಸಬೇಕು. ಬೆಂಗಳೂರು-ಹುಬ್ಬಳಿ ನಡುವೆ ಓಡುವ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲನ್ನು ಬಾಗಲಕೋಟೆವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

    ನಿತ್ಯ ಬಾಗಲಕೋಟೆ ಮೂಲಕ ಬೆಂಗಳೂರಿಗೆ ಓಡುವ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ೧ಎಸಿ ಹಾಗೂ ೨ಎಸಿ ಬೋಗಿಗಳನ್ನು ಪ್ರತ್ಯೇಕ ಒದಗಿಸಬೇಕು ಎಂದು ವಿಪ ಸದಸ್ಯ ಪಿ.ಎಚ್.ಪೂಜಾರ ಸಚಿವ ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn WhatsApp Reddit Tumblr Email

    Related Posts

    May 22, 2025 ಬಾಗಲಕೋಟೆ

    ಶೀಘ್ರದಲ್ಲೇ ಬಾಗಲಕೋಟೆಗೆ ವಂದೇ ಭಾರತ ರೈಲು: ಸೋಮಣ್ಣ

    May 22, 2025 ಬಾಗಲಕೋಟೆ

    ಮೋದಿ ಅಪಮಾನಿಸಿ ಪೋಸ್ಟ್; ಯುವಕ ಪೋಲಿಸ್ ವಶಕ್ಕೆ

    May 20, 2025 ಬಾಗಲಕೋಟೆ

    ರಾಜಕೀಯ ಪರಾಕಾಷ್ಟೆ ತಲುಪಿದ ಬಣ ಬಡಿದಾಟ

    May 20, 2025 ಬಾಗಲಕೋಟೆ

    ನೌಕರಿ ಇಲ್ಲವೇ ದಯಾ ಮರಣ: ವಿಜಯಲಕ್ಷ್ಮೀ

    May 20, 2025 ಬಾಗಲಕೋಟೆ

    ಇನ್ನೂ 5 ದಿನಗಳ ಕಾಲ ಮಳೆ ಸಾಧ್ಯತೆ

    May 20, 2025 ಸಿನೆಮಾ

    ಎನ್‌ಟಿಆರ್ ಜನ್ಮದಿನಕ್ಕೆ ‘ವಾರ್ 2’ ಟೀಸರ್ ಬಿಡುಗಡೆ!

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.