Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • ಸಿನೆಮಾ
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ನಿಡಗುಂದಿಯಲ್ಲಿ ಶಿಕ್ಷಕರಿಗಾಗಿ ಬೃಹತ್ ಉದ್ಯೋಗ ಮೇಳ
    ಬಾಗಲಕೋಟೆ

    ನಿಡಗುಂದಿಯಲ್ಲಿ ಶಿಕ್ಷಕರಿಗಾಗಿ ಬೃಹತ್ ಉದ್ಯೋಗ ಮೇಳ

    SanjeBy SanjeMay 17, 20251 Min Read
    ಉದ್ಯೋಗ ಮೇಳ

    ಬಾಗಲಕೋಟೆ: ವಿಜಯಪುರ ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ನಿಡಗುಂದಿ ಪಟ್ಟಣದಲ್ಲಿ ಶಿಕ್ಷಕರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮೇ 20 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಬನಶಂಕರಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಈ ಮೇಳ ನಡೆಯಲಿದೆ ಎಂದು ಬದಾಮಿ ತಾಲೂಕಿನ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಕೊಳ್ಳಿ ತಿಳಿಸಿದರು.

    ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ, ಬಾಗಲಕೋಟೆ, ನಿಡಗುಂದಿ, ಹುನಗುಂದ, ಇಲಕಲ್, ಮುದ್ದೇಬಿಹಾಳ, ಬಸವನ ಬಾಗೇವಾಡಿ, ಕೊಲ್ದಾರ, ಸಿಂದಗಿ, ಬಬಲೇಶ್ವರ ಹಾಗೂ ಕುಷ್ಟಗಿ ತಾಲೂಕುಗಳಿಂದ ಹಲವಾರು ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಂಡಿವೆ ಎಂದರು.

    ಈ ಕೆಳಗಿನ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು: ಬಿಎ, ಬಿಎಡ್, ಬಿಎಸ್ಸಿ, ಬಿಎಡ್. ಎಂ.ಎ, ಎಂಎಸ್ಸಿ, ಬಿಸಿಎ, ಬಿಕಾಂ, ಎಂಕಾಮ್, ಅದೇ ರೀತಿ ಅಡುಗೆ ತಯಾರಕರು, ಡ್ರೈವರ್‌ಗಳು, ಆಯಾಗಳು, ವಾಚ್‌ಮನ್ ಹುದ್ದೆಗಳಿಗೆಲೂ ಅವಕಾಶವಿದ್ದು, ಮೇಳದಲ್ಲಿ ಭಾಗವಹಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಎಲ್ಲಾ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಭಾವಚಿತ್ರ ಹಾಗೂ ಬಯೋಡೇಟಾವನ್ನು ಹೊಂದಿರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವಿಕೆಗಾಗಿ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ತಿಳಿಸಿದರು.

    ಇದು ಉದ್ಯೋಗ ಹುಡುಕುತ್ತಿರುವ ಶಿಕ್ಷಕರಿಗೆ ಸುವರ್ಣಾವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಕಾರ್ಯದರ್ಶಿ ಎಸ್.ಎಸ್. ಪಾಟೀಲ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಎಮ್. ಎಸ್. ಕೊಪ್ಪ, ಬಿ.ಎಮ್. ಬಿರಾದಾರ, ಮುಸ್ತಾಕಮುಲ್ಲಾಇದ್ದರು.

    Share. Facebook Twitter Pinterest LinkedIn WhatsApp Reddit Tumblr Email

    Related Posts

    May 22, 2025 ಬಾಗಲಕೋಟೆ

    ಅಯೋಧ್ಯೆಗೆ ವಾರಕ್ಕೆ ಮೂರು ದಿನ ರೈಲು ಓಡಿಸಿ: ಪೂಜಾರ

    May 22, 2025 ಬಾಗಲಕೋಟೆ

    ಶೀಘ್ರದಲ್ಲೇ ಬಾಗಲಕೋಟೆಗೆ ವಂದೇ ಭಾರತ ರೈಲು: ಸೋಮಣ್ಣ

    May 22, 2025 ಬಾಗಲಕೋಟೆ

    ಮೋದಿ ಅಪಮಾನಿಸಿ ಪೋಸ್ಟ್; ಯುವಕ ಪೋಲಿಸ್ ವಶಕ್ಕೆ

    May 20, 2025 ಬಾಗಲಕೋಟೆ

    ರಾಜಕೀಯ ಪರಾಕಾಷ್ಟೆ ತಲುಪಿದ ಬಣ ಬಡಿದಾಟ

    May 20, 2025 ಬಾಗಲಕೋಟೆ

    ನೌಕರಿ ಇಲ್ಲವೇ ದಯಾ ಮರಣ: ವಿಜಯಲಕ್ಷ್ಮೀ

    May 20, 2025 ಬಾಗಲಕೋಟೆ

    ಇನ್ನೂ 5 ದಿನಗಳ ಕಾಲ ಮಳೆ ಸಾಧ್ಯತೆ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.