Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಸಿನೆಮಾ
    • EPaper
    • ಅರ್ಜಿ ಆಹ್ವಾನ
    • ಲೇಖನಗಳು
    Facebook X (Twitter) Instagram
    Sanjedarshan
    Home»ಇತರ ಜಿಲ್ಲಾ ಸುದ್ದಿ»ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ : ಮಲ್ಲಿಕಾರ್ಜುನ ಚರಂತಿಮಠ
    ಇತರ ಜಿಲ್ಲಾ ಸುದ್ದಿ

    ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ : ಮಲ್ಲಿಕಾರ್ಜುನ ಚರಂತಿಮಠ

    SanjeBy SanjeDecember 20, 20231 Min Read

    ಬಾಗಲಕೋಟೆ : ರಾಜ್ಯಾದ್ಯಂತ ಸೇವೆ ಸಲ್ಲಿಸುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕೂಡಲೇ ಕಾಯಂಗೊಳಿಸುವ ಮೂಲಕ ಅವರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಚರಂತಿಮಠ ಮತ್ತು ವಸ್ರ್ತದ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಒತ್ತಾಯಿಸಿದರು.

    ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 27 ದಿನಗಳಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.

    ಅತಿಥಿ ಉಪನ್ಯಾಸಕರು ಅತ್ಯಂತ ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ದೇಶದ ಯುವ ಸಮುದಾಯವನ್ನು ವಿದ್ಯಾವಂತರನ್ನಾಗಿ ಮಾಡುವ ಜತೆಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಉಪನ್ಯಾಸಕರು ನಿಭಾಯಿಸುತ್ತಿದ್ದಾರೆ. ಕಳೆದ 27 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸಚಿವರು, ಸಂಬಂದಿಸಿದ ಅಧಿಕಾರಿಗಳು ಅವರ ಬೇಡಿಕೆಗೆ ಸ್ಪಂದಿಸದೇ ಇರುವುದು ಸರ್ಕಾರದ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.

    ಉಪನ್ಯಾಸಕರು, ತರಗತಿ ಬಹಿಷ್ಕರಿಸಿ ಹೋರಾಟ ನಡೆ ಸುತ್ತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೂ ಸಮಸ್ಯೆ ಯಾಗಿದೆ. ಈ ಕೂಡಲೇ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಹಾಗೂ ಉಪನ್ಯಾಸಕರ ಬದುಕಿಗೆ ಭದ್ರತೆಗಾಗಿ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇದು ಕೇವಲ ಬಾಗಲಕೋಟೆ ಜಿಲ್ಲೆಯ ಸಮಸ್ಯೆಯಲ್ಲ. ಇಡೀ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಇಂದು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

    ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ, ವಿಜಯ ಸುಲಾಖೆ, ಗುರು ಅನಗವಾಡಿ, ಅರುಣ ಲೋಕಾಪುರ, ಪ್ರಶಾಂತ ಸೋನಕನಾಳ, ರಾಘು ಯಾದಗಿರಿ ಮುಂತಾದವರು ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn WhatsApp Reddit Tumblr Email

    Related Posts

    July 19, 2025 ಬಾಗಲಕೋಟೆ

    ಪಂಚಮಸಾಲಿ ಪೀಠಕ್ಕೆ ಪರ್ಯಾಯ ಶ್ರೀ ನೇಮಕ

    May 17, 2025 ಬಾಗಲಕೋಟೆ

    ನಿಡಗುಂದಿಯಲ್ಲಿ ಶಿಕ್ಷಕರಿಗಾಗಿ ಬೃಹತ್ ಉದ್ಯೋಗ ಮೇಳ

    February 18, 2024 ಇತರ ಜಿಲ್ಲಾ ಸುದ್ದಿ

    ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ರಂಭಾಪುರಿ ಸ್ವಾಮೀಜಿ ಭೇಟಿ

    January 20, 2024 ಇತರ ಜಿಲ್ಲಾ ಸುದ್ದಿ

    ಪ್ರೌಢಶಾಲಾ ಸಹಶಿಕ್ಷಕಿ ಅಮಾನತ್ತು

    January 19, 2024 ಇತರ ಜಿಲ್ಲಾ ಸುದ್ದಿ

    ಬಾಗಲಕೋಟೆ ಎಫ್‍ಎಂ ಕೇಂದ್ರಕ್ಕೆ ಗದ್ದಿಗೌಡ ಚಾಲನೆ

    January 18, 2024 ಇತರ ಜಿಲ್ಲಾ ಸುದ್ದಿ

    ಪಂಚಮುಖಿ ಆಂಜನೇಯ ಮೂರ್ತಿಯ ಬೃಹತ್ ಮೆರವಣಿಗೆ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ, ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.