Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ಸಿನೆಮಾ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • EPaper
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ನರೇಗಾ ಕಾಮಗಾರಿ ವೀಕ್ಷಿಸಿದ ಉಪ ಕಾರ್ಯದರ್ಶಿ
    ಬಾಗಲಕೋಟೆ

    ನರೇಗಾ ಕಾಮಗಾರಿ ವೀಕ್ಷಿಸಿದ ಉಪ ಕಾರ್ಯದರ್ಶಿ

    SanjeBy SanjeJuly 3, 20251 Min Read
    ಬಸರಿಗಿಡದ

    ಬಾಗಲಕೋಟೆ: ಜಿಲ್ಲೆಯ ಹೂಲಗೇರಿ, ಅಗಸನಕೊಪ್ಪ, ಉಗಲವಾಟ, ಹಳಗೇರಿ, ಮಮಟಗೇರಿ ಸೇರಿದಂತೆ ಬಾದಾಮಿ ತಾಲೂಕಿನ ಹಳ್ಳಿಗಳಿಗೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎನ್.ವಾಯ್. ಬಸರಿಗಿಡದ ಭೇಟಿ ನೀಡಿ ಪರಿಶೀಲಿಸಿದರು.

    ಹೂಲಗೇರಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಸಂಖ್ಯೆ, ಪೌಷ್ಟಿಕ ಆಹಾರ ವಿತರಣೆ, ಆಹಾರ ಧಾನ್ಯಗಳನ್ನು ಪರಿಶೀಲಿಸಿ, ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ತೆರಳಿ ಅಧಿಕಾರಿ ಹಾಗೂ ಸಿಬ್ಬಂದಿ ಹಾಜರಾತಿ ಮತ್ತು ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ಮಾಲಗಿ ಗ್ರಾಮದ ಅಂಗನವಾಡಿ ಕಟ್ಟಡ, ಶಾಲಾ ಶೌಚಾಲಯ ಕಾಮಗಾರಿಗಳನ್ನು ಪರಿಶೀಲಿಸಿ ಶಾಲೆಗೆ ಅಗತ್ಯವಾದ ಕೌಂಪೌಂಡ್ ಕಾಮಗಾರಿ ಕೈಗೊಳ್ಳುವಂತೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.

    ಬಸರಿಗಿಡದ

    ಶಾಲಾ ಅಡುಗೆ ಕೊಠಡಿಗೆ ತೆರಳಿ ಆಹಾರ ತಯಾರಿಸುವ ಕ್ರಮ ಹಾಗೂ ಆಹಾರ ಧಾನ್ಯಗಳ ಗುಣಮಟ್ಟ ವೀಕ್ಷಿಸಿದರು. ಅಗಸನಕೊಪ್ಪ ಗ್ರಾಮದ ಆಯುಷಮಾನ್ ಆರೋಗ್ಯ ಕೇಂದ್ರಕ್ಕೆ ತೆರಳಿ ಔಷಧಿಗಳ ದಾಸ್ತಾನು, ಚಿಕಿತ್ಸೆ ಪಡೆದವರ ವಿವರ, ಸಿಬ್ಬಂದಿ ಹಾಜರಾತಿ ಗಮನಿಸಿದರು. ಮಮಟಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಉಗಲವಾಟ ಗ್ರಾಮದ ಬದು ನಿರ್ವಹಣೆ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

    ಮಮಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಗೇರಿ ಗ್ರಾಮದ ಹಳ್ಳದ ಹೂಳೇತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿಕಾರರ ಜೊತೆ ಸಂವಾದ ಮಾಡಿ, ಎನ್.ಎನ್.ಎಂ.ಎಸ್ ಹಾಜರಿ ಪರಿಶೀಲಿಸಿದರು. ನಂತರ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ತೆರಳಿ ವಿವಿಧ ಯೋಜನೆಗಳ ಬಗ್ಗೆ ಅನುಷ್ಠಾನ ಬಗ್ಗೆ ಮಾಹಿತಿ ಪಡೆದುಕೊಂಡರು.

    ಭೇಟಿ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀದೇವಿ ಲಮಾಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಮಾಕೊಂಡ, ಪಂಚಾಯತ ಅಭಿವೃದ್ದಿ ಅಧಿಕಾರಿಗಳಾದ ಶಿವಲಿಂಗಯ್ಯ ಹಿರೇಮಠ, ಸವಿತಾ ನಂದೆಪ್ಪನವರ, ಡಿ.ಐ.ಇಸಿ ಅಜಯ ಸೂಳಿಕೇರಿ, ಸಿದ್ದಲಿಂಗಯ್ಯ ಹಿರೇಮಠ, ಟಿ.ಐ.ಇಸಿ ಸಮೀರ ಉಮರ್ಜಿ, ಬಿ.ಎಫ್.ಟಿ ಅನೀಲ ಮೇಟಿ, ಮಂಜುನಾಥ ಸಿದ್ದಾಪೂರ ಸೇರಿದಂತೆ ಇತರರು ಇದ್ದರು.

    Share. Facebook Twitter Pinterest LinkedIn WhatsApp Reddit Tumblr Email

    Related Posts

    July 5, 2025 ಬಾಗಲಕೋಟೆ

    ನಾಳೆ ಪ್ರತಿಭಾ ಪುರಸ್ಕಾರ- ಸಾಧಕರಿಗೆ ಸನ್ಮಾನ

    July 5, 2025 ಅರ್ಜಿ ಆಹ್ವಾನ

    ಕ.ರಾ.ಮು.ವಿ. ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭ

    July 5, 2025 ಅರ್ಜಿ ಆಹ್ವಾನ

    ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

    July 4, 2025 ಸಿನೆಮಾ

    ‘ರಾಮಾಯಣ’ ಚಿತ್ರದ Introduction ವಿಡಿಯೋ ಬಿಡುಗಡೆ

    July 4, 2025 ಬಾಗಲಕೋಟೆ

    ಸಕ್ರಿ ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

    July 4, 2025 ಬಾಗಲಕೋಟೆ

    ಕಟಗೇರಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ಆತ್ಮ ನಿರ್ಬರ್ ಪ್ರಶಸ್ತಿ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.