Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ಸಿನೆಮಾ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • EPaper
    Facebook X (Twitter) Instagram
    Sanjedarshan
    Home»ಸಿನೆಮಾ»‘ರಾಮಾಯಣ’ ಚಿತ್ರದ Introduction ವಿಡಿಯೋ ಬಿಡುಗಡೆ
    ಸಿನೆಮಾ

    ‘ರಾಮಾಯಣ’ ಚಿತ್ರದ Introduction ವಿಡಿಯೋ ಬಿಡುಗಡೆ

    SanjeBy SanjeJuly 4, 20251 Min Read
    ರಾಮಾಯಣ

    ಬಹುನಿರೀಕ್ಷಿತ ಮತ್ತು ಅದ್ದೂರಿ ಬಜೆಟ್‌ನ ‘ರಾಮಾಯಣ’ ಸಿನಿಮಾದ ಮೊದಲ ಭಾಗದ Introduction ವಿಡಿಯೋ ಜುಲೈ 3ರಂದು ಬಿಡುಗಡೆಗೊಂಡಿದೆ. ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಚಿತ್ರದ ವಿಡಿಯೋ ಅದ್ಭುತವಾಗಿ ಮೂಡಿಬಂದಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ವಿಶೇಷವಾಗಿ ರಣಬೀರ್ ಕಪೂರ್ ಬಾಣ ಬಿಡುವ ದೃಶ್ಯ ಹಾಗೂ ಯಶ್ ಅವರ ಲುಕ್ ಅಭಿಮಾನಿಗಳ ಗಮನ ಸೆಳೆದಿವೆ.

    ಈ ಮೆಗಾ ಪ್ರಾಜೆಕ್ಟ್‌ನಲ್ಲಿ ಪ್ರಮುಖ ಪಾತ್ರಗಳಲ್ಲಿ ರಣಬೀರ್ ಕಪೂರ್ ರಾಮನಾಗಿ, ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರವಿ ದುಬೆ ಲಕ್ಷ್ಮಣನಾಗಿ, ಮತ್ತು ಸನ್ನಿ ಡಿಯೋಲ್ ಹನುಮಾನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಈ ವಿಡಿಯೋ ಮೂಲಕ ಖಚಿತವಾಗಿದೆ.

    ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರಕ್ಕೆ ಪ್ರಖ್ಯಾತ ಸಂಗೀತ ನಿರ್ದೇಶಕರಾದ ಹಾನ್ಸ್ ಝಿಮ್ಮರ್ ಮತ್ತು ಎ.ಆರ್. ರೆಹಮಾನ್ ಸಂಗೀತ ನೀಡಿದ್ದು, ಕುಮಾರ್ ವಿಶ್ವಾಸ್ ಅವರ ಸಾಹಿತ್ಯ ಕಾವ್ಯಾತ್ಮಕ ಸ್ಪರ್ಶ ನೀಡಲಿದೆ. ಜೊತೆಗೆ, ಎಂಟು ಬಾರಿ ಅಕಾಡೆಮಿ ಪ್ರಶಸ್ತಿ ವಿಜೇತ DNEG ಸಂಸ್ಥೆ ಈ ಚಿತ್ರದಲ್ಲಿ VFX ಕೆಲಸ ಮಾಡಿದ್ದು ಮತ್ತೊಂದು ವಿಶೇಷವಾಗಿದೆ.

    ‘ರಾಮಾಯಣ’ ಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಮೊದಲ ಭಾಗವು 2026ರ ದೀಪಾವಳಿಗೆ ತೆರೆಕಾಣಲಿದ್ದರೆ, ಎರಡನೇ ಭಾಗವು 2027ರ ದೀಪಾವಳಿಗೆ ಪ್ರೇಕ್ಷಕರ ಮುಂದೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

    Share. Facebook Twitter Pinterest LinkedIn WhatsApp Reddit Tumblr Email

    Related Posts

    July 5, 2025 ಬಾಗಲಕೋಟೆ

    ನಾಳೆ ಪ್ರತಿಭಾ ಪುರಸ್ಕಾರ- ಸಾಧಕರಿಗೆ ಸನ್ಮಾನ

    July 5, 2025 ಅರ್ಜಿ ಆಹ್ವಾನ

    ಕ.ರಾ.ಮು.ವಿ. ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭ

    July 5, 2025 ಅರ್ಜಿ ಆಹ್ವಾನ

    ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

    July 4, 2025 ಬಾಗಲಕೋಟೆ

    ಸಕ್ರಿ ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

    July 4, 2025 ಬಾಗಲಕೋಟೆ

    ಕಟಗೇರಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ಆತ್ಮ ನಿರ್ಬರ್ ಪ್ರಶಸ್ತಿ

    July 4, 2025 ರಬಕವಿ-ಬನಹಟ್ಟಿ

    ‘ಮಕ್ಕಳು ಸಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳಬೇಕು’

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.