Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ಸಿನೆಮಾ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • EPaper
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ಸಾಮರಸ್ಯ ಸಾಧಿಸುವ ವಿಶಿಷ್ಟ ಶಕ್ತಿ ಯೋಗಕ್ಕಿದೆ: ಜೋಶಿ
    ಬಾಗಲಕೋಟೆ

    ಸಾಮರಸ್ಯ ಸಾಧಿಸುವ ವಿಶಿಷ್ಟ ಶಕ್ತಿ ಯೋಗಕ್ಕಿದೆ: ಜೋಶಿ

    SanjeBy SanjeJune 21, 20252 Mins Read
    ಜೋಶಿ

    ಬಾಗಲಕೋಟೆ: ಯೋಗವು ನಮ್ಮ ದೇಹ, ಮನಸ್ಸು ಮತ್ತು ಆತ್ಮಬಲ ಹೆಚ್ಚಿಸುವುದು ಮಾತ್ರವಲ್ಲದೆ, ಜಗತ್ತಿನಲ್ಲಿ ಸಾಮರಸ್ಯ ಸಾಧಿಸುವ ವಿಶಿಷ್ಟ ಶಕ್ತಿ ಸಹ ಹೊಂದಿದೆ ಎಂದು ಕೇಂದ್ರ ಆಹಾರ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ವಿಶ್ವ ಪಾರಂಪರಿಕ ತಾಣ ಪಟ್ಟದಕಲ್ಲಿನ ವಿರೂಪಾಕ್ಷ ದೇವಸ್ಥಾನದ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೆಕ್ಷಣ ಇಲಾಖೆ ಹಮ್ಮಿಕೊಂಡ 11ನೇ ಅಂತರರಾಷ್ಟ್ರೀಯ ಯೋಗದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಯೋಗ ನಮ್ಮ ಪ್ರಾಚೀನ ಆಧ್ಯಾತ್ಮಿಕ, ಶಾರೀರಿಕ ಮತ್ತು ಮಾನಸಿಕ ಸದೃಢತೆಗೆ ಉತ್ತಮ ಅಭ್ಯಾಸವಾಗಿದೆ. ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯ ವಾಕ್ಯವಾಗಿದೆ ಎಂದರು.

    ಭಾರತೀಯ ನೆಲದಲ್ಲಿ ಅರಳಿದ ಯೋಗವು ಪ್ರಧಾನಿ ಮಂತ್ರಿಗಳ ಆಶಯದಂತೆ ಜಾಗತಿಕ ಆರೋಗ್ಯ ಮತ್ತು ಶಾಂತಿಯನ್ನು ಉತ್ತೇಜಿಸುವ ಸಾಧನವಾಗಿದೆ. ಪ್ರಸ್ತುತದ ಪ್ರತಿಕೂಲಕ ಪರಿಸ್ಥಿತಿಯಲ್ಲಿ ಯೋಗ ಅನುಸರಣೆ ವಿಶ್ವಕ್ಕೆ ಅತ್ಯಗತ್ಯವಾಗಿದೆ ಎಂಬುದನ್ನು ಪ್ರಧಾನ ಮಂತ್ರಿಗಳು ಪ್ರತಿಪಾದಿಸಿದ್ದಾರೆ. ಅದರ ಪ್ರತಿಫಲವಾಗಿ ಇಂದು ವಿಶ್ವವೇ ಯೋಗಭ್ಯಾಸದಲ್ಲಿ ನಿರತವಾಗಿದೆ. 21ನೇ ಶತಮಾನ ಭಾರತದ ಶತಮಾನ ಆಗುವಲ್ಲಿ ಯೋಗ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್, ವಿಧಾನ ಪರಿಷತ್ ಶಾಸಕ ಹನುಮಂತ ನಿರಾಣಿ, ಜಿಲ್ಲಾಧಿಕಾರಿ ಸಂಗಪ್ಪ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಭಾರತೀಯ ಪುರಾತತ್ವ ಸಮೀಕ್ಷೆಯ ಹಿರಿಯ ಅಧಿಕಾರಿ ನವರತ್ನಿ ಕುಮಾರ್ ಪಾಟಕ್ ಹಾಗೂ ಅಧಿಕಾರಿ ವರ್ಗ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

    ಪಾರಂಪರಿಕ ತಾಣಗಳಿಗೆ ಭೇಟಿ

    ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ಬಳಿಕ ವಿಶ್ವ ಪಾರಂಪರಿಕ ತಾಣ ಪಟ್ಟದಕಲ್ಲಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಚಾಲುಕ್ಯರ ಆಳ್ವಿಕೆಯಲ್ಲಿ ಪಟ್ಟಾಭಿಷೇಕ ಸಮಾರಂಭಗಳಿಗೆ ಸಾಕ್ಷಿಯಾಗಿದ್ದ ಪಟ್ಟದಕಲ್ಲಿನಲ್ಲಿ ದಕ್ಷಿಣ ಭಾರತದ ದ್ರಾವಿಡ ಶೈಲಿ ಮತ್ತು ಉತ್ತರ ಭಾರತದ ನಾಗರ ಶೈಲಿಯ ವಾಸ್ತುಶಿಲ್ಪ ಅತ್ಯದ್ಭುತವಾಗಿದೆ. ಶಿಲ್ಪಕಲೆಯ ವಿಶಿಷ್ಟತೆಯಿಂದಾಗಿ ವಿಶ್ವ ಪರಂಪರೆಯು ತಾಣವಾಗಿರುವ ಪಟ್ಟದಕಲ್ ಅತ್ಯಂತ ಪ್ರಸಿದ್ಧ ಪ್ರವಾಸಿ ಕೇಂದ್ರವಾಗಿ ವಿಶ್ವದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

    Share. Facebook Twitter Pinterest LinkedIn WhatsApp Reddit Tumblr Email

    Related Posts

    June 21, 2025 ಬಾಗಲಕೋಟೆ

    ರೋಗ ಗುಣಪಡಿಸುವ ಶಕ್ತಿ ಯೋಗಕ್ಕಿದೆ: ಭಾಂಡಗೆ

    June 21, 2025 ಬಾಗಲಕೋಟೆ

    ಯೋಗದಿಂದ ವ್ಯಕ್ತಿಯ ಮನೋಬಲ ಹೆಚ್ಚಳ: ಪೇಜಾವರ ಶ್ರೀ

    June 20, 2025 ಲೇಖನಗಳು

    ಇಂದು ವಿಶ್ವ ಸಂಗೀತ ದಿನ

    June 20, 2025 ಬಾಗಲಕೋಟೆ

    ಕನಸು ನನಸು ಮಾಡಿದ ಬಾಗಲಕೋಟೆ ಜಿಲ್ಲೆ: ಜಾನಕಿ ಕೆ.ಎಂ.

    June 19, 2025 ಬಾಗಲಕೋಟೆ

    ನಕಲಿ ರಸಗೊಬ್ಬರ ಪೂರೈಕೆ ತಡೆಗೆ ಆಗ್ರಹ

    June 18, 2025 ಬಾಗಲಕೋಟೆ

    ನೂತನ ಜಿಲ್ಲಾಧಿಕಾರಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.